ನ್ಯೂಸ್ಶಿವಮೊಗ್ಗ

ಹಿಂದು ಮುಸ್ಲಿಮರ ಮಧ್ಯೆ ಒಡಕು ತರುತ್ತಿರುವವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು: ಚಿತ್ರನಟ ದುನಿಯಾ ವಿಜಯ್

ಹಿಂದು ಮುಸ್ಲಿಮರ ಮಧ್ಯೆ ಒಡಕು ತರುತ್ತಿರುವವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು: ಚಿತ್ರನಟ ದುನಿಯಾ ವಿಜಯ್

(SHIVAMOGA) ಸೊರಬ: ಸ್ವಾತಂತ್ರ‍್ಯ ಬಂದಾಗಿನಿoದ ಹಿಂದೂ – ಮುಸ್ಲಿಂ ಎನ್ನದೇ ಎಲ್ಲರೂ ಒಂದಾಗಿ  ಇದ್ದೆವು. ಆದರೆ ಇಂದು ಹಿಂದು ಮುಸ್ಲಿಮರ ಮಧ್ಯೆ ಒಡಕು ತರುತ್ತಿರುವವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಚಿತ್ರನಟ ದುನಿಯಾ ವಿಜಯ್ ಹೇಳಿದರು.
ಸೊರಬ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು ಅಪಪ್ರಚಾರ ಮಾಡುವುದು ಶತೃವಿನ ಕೊನೆಯ ಅಸ್ತ್ರ ವಾಗಿದೆ.  ಎಲ್ಲ ಜನಾಂಗದಲ್ಲಿ ಒಳ್ಳೆಯವರು ಇದ್ದಾರೆ, ಕೆಟ್ಟವರು ಸಹ ಇದ್ದಾರೆ. ಆದರೆ ಜಾತಿ ಜಾತಿಗಳ ಮಧ್ಯೆ ಒಡಕು ತರುವುದು ಸರಿಯಲ್ಲ.

ಸೊರಬ ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವವರು ಇರಬಹುದು. ನಮಗೆ ನಿಮ್ಮ ಪಕ್ಷದ ಕುರಿತ ಗೌರವ ಇದೆ. ಆದರೆ, ಹೆಚ್ಚಾಗಿ ಇಲ್ಲಿ ರೈತ ಕುಟುಂಬಗಳು ವಾಸವಾಗಿವೆ. 30 ವರ್ಷದ ಹಿಂದೆ ಕೃಷಿ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದ್ದ ಬಂಗಾರಪ್ಪ ಅವರ ಸೇವೆಯನ್ನು ಮರೆಯಕೂಡದು. ಗೀತಾ ಶಿವರಾಜ್ ಕುಮಾರ್ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆಯಾಗಿದೆ.
ಬಂಗಾರಪ್ಪ ಕೇವಲ ಮುಖ್ಯಮಂತ್ರಿಯಲ್ಲದೇ, ಅವರು ಹೋರಾಟಗಾರರಾಗಿದ್ದರು, ಬಡವರ ಪರವಾಗಿದ್ದರು. ನೀವು ಅವರ ಮೇಲಿನ ಗೌರವಕ್ಕೆ ಬಂದು ಸೇರಿದ್ದಿರಿ. ಗೀತಕ್ಕನವರು ರಾಜಕೀಯಕ್ಕಾಗಿ ಅಲ್ಲ, ಬಡವರ, ಜನ ಪರ ಸೇವೆ ಮಾಡಬೇಕು ಎಂದು ಬಂದಿದ್ದಾರೆ. ಇಂದು ನಿಮ್ಮ ಮನೆ ಬಾಗಿಲಿಗೆ ಬಂಗಾರಪ್ಪನವರ ಮಗಳು ಬಂದಿದ್ದಾರೆ. ಆಶೀರ್ವಾದ ಮಾಡಬೇಕಾಗಿರುವುದು, ಸ್ವಾಭಿಮಾನ ಉಳಿಸಿಕೊಳ್ಳಬೇಕಾಗಿರುವುದು ನಿಮ್ಮ ಕೈಯಲ್ಲಿದೆ ಎಂದರು.

ವರದಿ: ಸಂದೀಪ ಯು.ಎಲ್, ಸೊರಬ

Leave a Reply

Your email address will not be published. Required fields are marked *

Scan the code