ಚಿಕ್ಕಮಗಳೂರುನ್ಯೂಸ್

ಮೂರು ರಾಜ್ಯಗಳ ಚುನಾವಣೆ ಫಲಿತಾಂಶ: ಲೋಕಸಭೆಗೆ ದಿಕ್ಸೂಚಿ

ಮೂರು ರಾಜ್ಯಗಳ ಚುನಾವಣೆ ಫಲಿತಾಂಶ: ಲೋಕಸಭೆಗೆ ದಿಕ್ಸೂಚಿ

(CHIKKAMAGALURU): ಬಾಳೆಹೊನ್ನೂರು: ಭಾನುವಾರ ಪ್ರಕಟಗೊಂಡ ರಾಜಸ್ಥಾನ, ಮದ್ಯಪ್ರದೇಶ ಹಾಗೂ ಛತ್ತಿಸ್‌ಘಡದ ಚುನಾವಣಾ ಫಲಿತಾಂಶವು ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಮುಖಂಡ ಟಿ.ಎಂ.ಉಮೇಶ್ ಕಲ್ಮಕ್ಕಿ ಹೇಳಿದ್ದಾರೆ.
ಮೂರು ರಾಜ್ಯಗಳಲ್ಲಿ ಬಿಜೆಪಿ ಪಕ್ಷವು ನಿರೀಕ್ಷೆಗೂ ಮೀರಿ ಸಾಧನೆಯನ್ನು ಮಾಡಿದ್ದು, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿರುವ ಜನಪರ ಅಭಿವೃದ್ಧಿ ಕಾರ್ಯಗಳೇ ಈ ಗೆಲುವಿಗೆ ಪೂರಕವಾಗಿ, ಜನರು ಮೆಚ್ಚಿ ಮತ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗುತ್ತಿರುವ ಹಡಗಾಗಿದ್ದು, ಜನರು ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ಮೋಡಿಯಾಗದೆ ಕೇವಲ ದೇಶದಲ್ಲಿ ಅಭಿವೃದ್ಧಿ ಪರ ರಾಜಕಾರಣಕ್ಕೆ ಮಾತ್ರ ತಮ್ಮ ಬೆಂಬಲ ಎಂಬುದನ್ನು ಈ ಚುನಾವಣಾ ಫಲಿತಾಂಶದ ಮೂಲಕ ತೋರಿಸಿಕೊಟ್ಟಿದ್ದಾರೆ. ಎಲ್ಲ ಕಡೆಗಳಲ್ಲಿಯೂ ಡಬಲ್ ಎಂಜಿನ್ ಸರ್ಕಾರ ಇರಬೇಕು ಎಂಬುದು ಜನರ ಬಯಕೆಯಾಗಿದೆ.


ಕಾಂಗ್ರೆಸ್ ಪಕ್ಷವು ಈ ಹಿಂದೆ ಕರ್ನಾಟಕದಲ್ಲಿ ಸುಳ್ಳು ಗ್ಯಾರಂಟಿಯ ಭರವಸೆಗಳನ್ನು ನೀಡಿ ಮತದಾರರಿಗೆ ಆಮಿಷವೊಡ್ಡಿ ಮತ ಪಡೆದು ಅಧಿಕಾರ ಪಡೆಯುವಲ್ಲಿ ಸಫಲವಾಯಿತು. ಆದರೆ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಪೂರ್ಣ ಪ್ರಮಾಣದಲ್ಲಿ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಾಗಲಿಲ್ಲ. ಇಲ್ಲಿನ ಗ್ಯಾರಂಟಿಗಳನ್ನೇ ಪ್ರಸ್ತುತ ಚುನಾವಣೆ ನಡೆದಿರುವ ರಾಜ್ಯದಲ್ಲಿಯೂ ಭರವಸೆ ನೀಡಿದರೂ ಸಹ ಅಲ್ಲಿನ ಮತದಾರರು ಅದಕ್ಕೆ ಬೆಲೆ ನೀಡಿಲ್ಲ.
ತೆಲಂಗಾಣದಲ್ಲಿಯೂ ಕೂಡ ಬಿಜೆಪಿ ಪಕ್ಷ ತನ್ನ ನೆಲೆಯನ್ನು ಕಂಡುಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಅಲ್ಲಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ದೇಶದ ಜಿಡಿಪಿ ಉನ್ನತ ಸ್ಥಾನದಲ್ಲಿದೆ. ಆರ್ಥಿಕ, ಉದ್ಯೋಗ, ಶಿಕ್ಷಣ, ಕೃಷಿ, ಆರೋಗ್ಯ, ಉದ್ಯಮಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳು ಅಭಿವೃದ್ಧಿಯ ಹಾದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಎನ್‌ಡಿಎ ಮಿತ್ರಪಕ್ಷಗಳು ಗಳಿಸಲಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ತನ್ನ ಬಲವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Scan the code