ನ್ಯೂಸ್ಶಿವಮೊಗ್ಗ

ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು : ಎಂ.ಎಸ್ ಕಾಳಿಂಗರಾಜ್.

ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು : ಎಂ.ಎಸ್ ಕಾಳಿಂಗರಾಜ್.

(SHIVAMOGA): ಸೊರಬ: ದುರ್ಬಲ ಮನಸ್ಸು ಮತ್ತು ದುರ್ಬಲ ವ್ಯಕ್ತಿತ್ವವೇ ಮನುಷ್ಯನಲ್ಲಿ ವ್ಯಸನ ಬೆಳೆಯಲು ಪ್ರಮುಖ ಕಾರಣ ಎಂದು ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎಂ.ಎಸ್ ಕಾಳಿಂಗರಾಜ್ ಅಭಿಪ್ರಾಯಪಟ್ಟರು.
ಪಟ್ಟಣದ ಬಿ.ಸಿ ಟ್ರಸ್ಟ್ ಕಚೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಂಬಾಕು ವ್ಯಸನದಿಂದ ಆರೋಗ್ಯ ಮೇಲೆ ಬಹಳಷ್ಟು ದುಷ್ಟರಿಣಾಮಗಳ ಉಂಟಾಗುತ್ತವೆ.

ಉದಾಹರಣೆಗೆ ಕ್ಯಾನ್ಸರ್, ಹೃದಯ ಸಂಬ0ಧಿ ಕಾಯಿಲೆಗಳು, ಪಾರ್ಶವಾಯು ಹಾಗೂ ತಂಬಾಕಿನಲ್ಲಿನ ನಿಕೋಟಿನ್ ಅಂಶ ರಕ್ತನಾಳಗಳಲ್ಲಿ ಸೇರಿ ದೇಹದ ಪ್ರತಿಯೊಂದು ಅಂಗದ ಮೇಲೆ ಪರಿಣಾಮ ಬಿರುತ್ತದೆ, ಈ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ, ಕೋಟ್ಪಾ ದಾಳಿ, ವ್ಯಸನಿಗಳಿಗೆ ಆಪ್ತ ಸಮಾಲೋಚನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಒಳ್ಳೆಯ ಮಾರ್ಗದಲ್ಲಿ ನಡೆಯುವ ಮತ್ತು ಉಳಿದವರಿಗೂ ಒಳ್ಳೆಯ ಮಾರ್ಗದರ್ಶನ ನೀಡುವ ಮೂಲಕ ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಯೋಜನಾಧಿಕಾರಿ ಜಯಂತಿ ಯೋಜನೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಮೇಲ್ವಿಚಾರಕ ಉಮೇಶ್ ಪೂಜಾರಿ, ಸೇವಾ ಪ್ರತಿನಿಧಿ ಸುಷ್ಮಾ, ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಇದ್ದರು.

ವರದಿ: ಸಂದೀಪ್ ಯು. ಎಲ್ ಸೊರಬ

Leave a Reply

Your email address will not be published. Required fields are marked *

Scan the code