ನಾಳೆ ಯಲಬುರ್ಗಿ ಗ್ರಾಮದ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ 11ನೇ ವರ್ಷದ ವೈಕುಂಠ ಏಕಾದಶಿ
ಬಂಗಾರಪೇಟೆ: ತಾಲೂಕಿನ ಯಲಬುರ್ಗಿ ಗ್ರಾಮದ
ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ 11ನೇ ವರ್ಷದ ವೈಕುಂಠ ಏಕಾದಶಿ ಬಹಳ ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ತಾಲೂಕಿನ ಭಕ್ತಾದಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಪೂಜಾರಿ ರಾಮಸ್ವಾಮಿ ತಿಳಿಸಿದರು.
ಯಲಬುರ್ಗಿ ಗ್ರಾಮದ ದೇವಸ್ಥಾನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ವೈಕುಂಠ ಏಕಾದಶಿ ಪ್ರಯುಕ್ತ ಇಂದು ಸಂಜೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುವುದು,ನಾಳೆ ಬೆಳಿಗ್ಗೆ ಸುಪ್ರಭಾತ ಸೇವೆ ಪಂಚಾಮೃತ ಅಭಿಷೇಕ ವೈಕುಂಠ ದ್ವಾರಪೂಜೆ ಮತ್ತು ವಿಶೇಷ ಪೂಜೆ, ಹೋಮ, ಸ್ವಾಮಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಿ ನಂತರ ಮಹಾಮಂಗಳಾರತಿ ನೆರವೇರಸಲಾಗುವುದು ಎಂದರು.
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದಲ್ಲಿ ವೈಕುಂಠ ದ್ವಾರದಲ್ಲಿ ಶ್ರೀ ಲಕ್ಷ್ಮಿ ವರದರಾಜಸ್ವಾಮಿ ಉತ್ಸವ ಮೂರ್ತಿಯನ್ನು ವೈಕುಂಠ ದ್ವಾರದಲ್ಲಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿದ ನಂತರ ವೈಕುಂಠ ದ್ವಾರದ ದರ್ಶನ ವ್ಯವಸ್ಥೆ ಮಾಡಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ಬೆಳಿಗ್ಗೆಯಿಂದಲೇ ತಾಲೂಕಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದರ್ಶನ ಮಾಡಿ ನಂತರ ವೈಕುಂಠ ದ್ವಾರದ ಮೂಲಕ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದುಕೊಳ್ಳಿ ಎಂದು ಹೇಳಿದರು .
ದೇವಾಲಯದ ವ್ಯವಸ್ಥಾಪಕರಾದ ಮೇಸ್ತ್ರಿಶ್ರೀನಿವಾಸ್ ಪದ್ಮಮ್ಮ ರವರು ಮಾತನಾಡಿ,ಪ್ರತಿವರ್ಷದಂತೆ ಈ ವರ್ಷವೂ ಸಹ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಬಹಳ ಅದ್ದೂರಿಯಾಗಿ ಆಚರಣೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ತಾಲೂಕಿನ ಸುತ್ತ ಮುತ್ತಲಿನ ಗ್ರಾಮಸ್ಥರು ದೇವಸ್ಥಾನಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ವೆಂಕಟಸ್ವಾಮಿ ಗಿರಿಜಮ್ಮ, ರಮೇಶ್ ಸುಜಾತಾ, ಬಾಬು, ಅಮರೇಶ್, ಜಯರಾಮ್,ಕೇಶವ, ಚಂದ್ರಪ್ಪ, ಕೃಷ್ಣಪ್ಪ, ಶ್ರೀನಿವಾಸ್ ಆಚಾರಿ, ಸುಧಾಕರ್ ಹಾಗೂ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ