ಚಿಕ್ಕಮಗಳೂರುನ್ಯೂಸ್

ಪ್ರವಾಸಿಗರೇ ಕಾಫಿ ನಾಡಿನ ಈ ಭಾಗಗಳಿಗೆ ನಿಮ್ಮ ಪ್ರವಾಸವನ್ನು ನಾಲ್ಕು ದಿನ ರದ್ದುಗೊಳಿಸಿ.

ಪ್ರವಾಸಿಗರೇ ಕಾಫಿ ನಾಡಿನ ಈ ಭಾಗಗಳಿಗೆ ನಿಮ್ಮ ಪ್ರವಾಸವನ್ನು ನಾಲ್ಕು ದಿನ ರದ್ದುಗೊಳಿಸಿ.

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣವಾದ ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಲಕ್ಷಾಂತರ ದಾತ್ತಮಾಲಾಧಾರಿಗಳು ಹಾಗೂ ಪ್ರವಾಸಿಗರು ಆಗಮಿಸುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠದ ಸುತ್ತ ಮುತ್ತಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ನವೆಂಬರ್ 4ರ ಬೆಳಗ್ಗೆ 6 ರಿಂದ ನವೆಂಬರ್.6ರ ಬೆಳಗ್ಗೆ 10 ಗಂಟೆಯ ವರೆಗೆ ಚಂದ್ರದ್ರೋಣ ಪವರ್ತ ಸಾಲಿನ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

Scan the code