ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಕೆಲಸ ಆಗಬೇಕಾಗಿದೆ.
.…..ಗ್ರಾ.ಪಂ.ಅಧ್ಯಕ್ಷೆ ಶ್ರೀದೇವಿ
ತುಮರಿ ಸರ್ಕಾರಿ ಶಾಲೆಯಲ್ಲಿ ತುಮರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
(ಸಾಗರ/ ತುಮರಿ:ಸೆ-14/) ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದು ತುಮರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀದೇವಿ ರಾಮಚಂದ್ರ ಹೇಳಿದರು ಅವರು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತುಮರಿಯಲ್ಲಿ ಆಯೋಜಿಸಿದ್ದ ತುಮರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಕೆಲಸ ಆಗಬೇಕಾಗಿದೆ, ಈ ಬಗ್ಗೆ ಶಿಕ್ಷಕರು ಪೋಷಕರು ಹೆಚ್ಚಿನ ರೀತಿಯಲ್ಲಿ ಮಾರ್ಗದರ್ಶನ ನೀಡಬೇಕಾಗಿದೆ ಎಂದವರು ಹೇಳಿದರು.
ಶಿಕ್ಷಣ ಸಂಯೋಜಕರಾದ ಶೇಖರಪ್ಪ ಮಾತನಾಡಿ ಪ್ರಾಕೃತಿಕವಾಗಿ ಶ್ರೀಮಂತವಾಗಿರವ ಈ ಪ್ರದೇಶದಲ್ಲಿ ಸಾಂಸ್ಕೃತಿಕವಾಗಿಯೂ ವಿಶೇಷವಾಗಿದೆ, ಹಾಗಾಗಿ ಸಹಜವಾಗಿರುವ ಪ್ರತಿಭೆಗಳು ಈ ಪ್ರದೇಶದಲ್ಲಿ ಕಂಡುಬರುತ್ತಾರೆ. ಪ್ರತಿಭೆ ಯಾರ ಸ್ವತ್ತು ಅಲ್ಲ ಹಾಗಾಗಿ ಸತತ ಪರಿಶ್ರಮದಿಂದ ಮಾತ್ರ ಗುರಿಯನ್ನು ಸಾಧಿಸಲು ಸಾಧ್ಯ ಎಂದವರು ಹೇಳಿದರು.
ಪ್ರತಿಭಾ ಕಾರಂಜಿ ತಾಲೂಕು ನೋಡಲ್ ಅಧಿಕಾರಿ ವಿ.ಟಿ.ಸ್ವಾಮಿ ಮಾತನಾಡಿ ಮಕ್ಕಳಲ್ಲಿ ಸಹಜವಾಗಿ ಅಡಗಿರುವ ಪ್ರತಿಭೆಗೆ ಸೂಕ್ತ ಮಾರ್ಗದರ್ಶನ ನೀಡಬೇಕಾಗಿದೆ. ಸಾಂಸ್ಕೃತಿಕ ಮನಸುಗಳಿಂದ ಮಾತ್ರ ಸಾಮಾಜಿಕ ಸಾಮರಸ್ಯ ಸಾಧ್ಯ ಎಂದವರು ಹೇಳಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶ್ರೀನಿವಾಸ,ಎಸ್.ಡಿ ಎಂ.ಸಿ ಉಪಾಧ್ಯಕ್ಷರಾದ ಉಮಾ, ಶಿಕ್ಷಣ ಸಂಯೋಜಕರಾದ ಚಂದ್ರಪ್ಪ, ಉಮೇಶ್, ಕಟ್ಟಿನ ಕಾರು ಪ್ರೌಢಶಾಲೆ ಶಿಕ್ಷಕ ಹರಿಪ್ರಸಾದ್, ಸಿ.ಆರ್.ಪಿ ಪ್ರಸನ್ನ ಕುಮಾರ್ ತುಮರಿ, ಚಂದ್ರಪ್ಪ ಅಳೂರು,ಪ್ರವೀಣ್, ಭರಮಗೌಡ,ಸತೀಶ್, ಶಿಕ್ಷಕರಾದ ರಾಜಾಭಕ್ಷ್, ವನಜಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.
ವರದಿ:- ರಾಘವೇಂದ್ರ ತಾಳಗುಪ್ಪ