ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡುವುದು ಒಂದೇ, ದೇವಸ್ಥಾನದ ಮುಂದೆ ಮಲಮೂತ್ರ ವಿಸರ್ಜನೆ ಮಾಡುವುದು ಒಂದೇ.
(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮೂರ್ಗದ್ದೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಇರುವ ಚಿಕ್ಕಮಗಳೂರು ಶೃಂಗೇರಿಗೆ ತೆರಳುವ ಮಾರ್ಗ ಮಧ್ಯ ಇರುವ ಸ್ಥಳ, ರಸ್ತೆ ಬದಿಯಲ್ಲಿ ನೈಸರ್ಗಕವಾಗಿ ಬರುತ್ತಿರುವ ಗುಡ್ಡದ ನೀರಿಗೆ ಜಯಪುರ ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ತೊಟ್ಟಿಯನ್ನು ನಿರ್ಮಿಸಿದ್ದು ಅದನ್ನು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಎಂದು ಜಯಪುರ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಆರೋಪಿಸಿದ್ದಾರೆ.
ಜಯಪುರ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿರುವ ನೈಸರ್ಗಿಕವಾಗಿ ಶುದ್ಧ ಕುಡಿಯುವ ನೀರಿಗೆ ನೀರಿನ ತೊಟ್ಟಿಯನ್ನು ನಿರ್ಮಿಸಿದ್ದು ಕಾಮಗಾರಿ ಪೂರ್ಣಗೊಂಡಿರುವುದಿಲ್ಲ ತೊಟ್ಟಿಗೆ ಮುಚ್ಚಿದ್ದ ಮುಚ್ಚಳವನ್ನು ತೆಗೆದು ಕೆಳಗೆ ಬಿಸಾಕಿದ್ದು ಸಾರ್ವಜನಿಕರ ಆಸ್ತಿಗಳನ್ನು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಅಪರೂಪಕ್ಕೆ ಒಳ್ಳೆಯ ಕೆಲಸಗಳು ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿದ್ದರೆ ಅದನ್ನು ಹಾಳು ಮಾಡುವುದಕ್ಕೆ ಕಾಯುತ್ತಿರುತ್ತಾರೆ, ರಸ್ತೆಯ ಬದಿಯಲ್ಲಿ ಹಾಗೂ ನೀರಿನ ತೊಟ್ಟಿ ಒಳಗೆ ಪ್ಯಾಂಪರ್ಸ್ ಹಾಕುವುದು, ಮಧ್ಯ ಸೇವನೆ ಮಾಡುವುದು, ವಾಹನ ಸವಾರರು ಸ್ಥಳೀಯ ವ್ಯಕ್ತಿಗಳು ಸ್ಥಳವನ್ನು ಮಲಿನ ಮಾಡುತ್ತಿದ್ದಾರೆ. ಹಾಗೂ ಕಾಮಗಾರಿಗಳ ಪೂರ್ತಿಗೊಂಡಿಲ್ಲ, ಪೂರ್ತಿಗೊಳ್ಳದ ಕಾಮಗಾರಿಯನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.
ಎಂದು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪ್ರಶಾಂತ್, ನಾಗೇಶ್ ರವರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜಯಪುರ ಗ್ರಾಮ ಪಂಚಾಯಿತಿ PDO ಹಾಗೂ ಪೊಲೀಸ್ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.