ಎ.ಗೊಲ್ಲಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ವಿಶ್ವ ಮಹಿಳಾ ಕಿಸಾನ್ ದಿವಸ್
(KOLARA) ಬಂಗಾರಪೇಟೆ ತಾಲೂಕಿನ ಅಕ್ಷಂತರ ಗೊಲ್ಲಹಳ್ಳಿ ಗ್ರಾಮದಲ್ಲಿ 2023 – 24ನೇ ಸಾಲಿನ ಆತ್ಮ ಯೋಜನೆ ಅಡಿಯಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ಮಹಿಳಾ ಕಿಸಾನ್ ದಿವಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಚಿಕ್ಕದೇವಮ್ಮ ನೆರವೇರಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ರೈತ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅಣಬೆ ಬೇಸಾಯದ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕರಾದ ಗಣೇಶ್ ಹಾಗೂ ಕೃಷಿ ತಾಂತ್ರಿಕ ಸಹಾಯಕರಾದ ರಾಧಾ, ಪವಿತ್ರ, ಸಂದೀಪ್, ಮಲ್ಲಿಕಾರ್ಜುನ, ಸೇವಾ ಪ್ರತಿನಿಧಿ ಪ್ರಜ್ವಲ, ಮಂಜುಳಾ, ಸ್ವಸಹಾಯ ಸಂಘದ ಮಹಿಳೆಯರು, ರೈತ ಮಹಿಳೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ