ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿ ಮತ್ತು ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ.
(KOLARA): ಬಂಗಾರಪೇಟೆ :2024ರ ಲೋಕಸಭಾ ಚುನಾವಣೆಯ ಕೋಲಾರ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿ ಮತ್ತು ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ಕೇವಲ ಮಾಧ್ಯಮಗಳು ಸೃಷ್ಟಿ ಮಾಡಿರುವುದು ಅಷ್ಟೇ, ಜನರ ಬಳಿ ಯಾವುದೇ ಮೋದಿ ಅಲೆ ಇಲ್ಲ,ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ್ದ ಪ್ರಧಾನಿ ಮೋದಿ ಅವರು ಈಗ ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿರುವುದು ಸಮಂಜಸವಲ್ಲ, 70ವರ್ಷಗಳ ಸುದೀರ್ಘ ಆಡಳಿತದಲ್ಲಿ ದೇಶದ ಸಾಲ 53 ಸಾವಿರ ಕೋಟಿ ಇತ್ತು, ಆದರೆ ಮೋದಿ ಕೇವಲ ಹತ್ತು ವರ್ಷಗಳಲ್ಲಿ 1 ಲಕ್ಷ 83,ಸಾವಿರ ಕೋಟಿ, ಇದು ಅಭಿವೃದ್ಧಿಯೇ,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದಂತಹ ಐದು ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ ಎಂದರು.
ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಗ್ಯಾರೆಂಟಿಯಿಂದ ದೇಶ ದಿವಾಲಿ ಆಗುತ್ತೆ ಅಂತ ಹೇಳಿದಿರಲ್ವಾ ಮೋದಿ ಅವರೇ ಈಗ ನೀವು ಕೊಟ್ಟಂತಹ ಗ್ಯಾರಂಟಿಗಳಿಂದ ದೇಶ ದಿವಾಲಿ ಆಗಲ್ವಾ ಎಂದು ಪ್ರಶ್ನೆ ಮಾಡಿದರು.
ಸ್ಥಳೀಯ ಸಂಸದ ಎಸ್ ಮುನಿಸ್ವಾಮಿ ರವರು ಮೂಲತಃ ಕಾಂಗ್ರೆಸ್ ಪಕ್ಷದವರಾಗಿದ್ದು ರಾಜಕೀಯ ಬದಲಾವಣೆಯಿಂದ ಬಿಜೆಪಿ ಪಕ್ಷವನ್ನು ಸೇರಿಕೊಂಡರು, ತದನಂತರ ತಾವು ಆರ್ ಎಸ್ ಎಸ್ ತತ್ವ ಸಿದ್ಧಾಂತಕ್ಕೆ ಒಳಪಟ್ಟವರಂತೆ ಬೊಬ್ಬೆ ಹಾಕುತ್ತಿದ್ದರು ಈಗ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಜೆಡಿಎಸ್ ಪಕ್ಷದ ಕದ ತಟ್ಟುತ್ತಿದ್ದಾರೆ ಇದು ಅವರ ದ್ವಂದ್ವ ನಿಲುವಿಗೆ ಸಾಕ್ಷಿಯಾಗಿದೆ ಎಂದು ವ್ಯಂಗ್ಯವಾಡಿದರು.
ಸಂಸದರು ಗಾಳಿಯಲ್ಲಿ ಬಂದು ಗಾಳಿಯಲ್ಲಿ ಹೋಗುತ್ತಾರೆ ಎಂದು ನಾನು ಭವಿಷ್ಯ ನುಡಿದಿದ್ದೆ ಇಂದು ಅದು ಸತ್ಯವಾಗಿದೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಮತ್ತು ಗೊಂದಲಗಳಿಲ್ಲ ಅಭ್ಯರ್ಥಿ ಯಾರೇ ಆದರೂ ಪಕ್ಷದ ಹಿತದೃಷ್ಟಿಯಿಂದ ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿ ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳು ಹಾಗೂ ಶಾಸಕನಾಗಿ ಕ್ಷೇತ್ರಕ್ಕೆ ಮಾಡಿದ ಅಭಿವೃದ್ಧಿ ಕಾರ್ಯಗಳು ಈ ಬಾರಿ ಶ್ರೀರಕ್ಷೆಯಾಗಲಿದೆ, ಪ್ರಸ್ತುತ 8 ಕೋಟಿ ರೂ.ಗಳ ಕಾಮಗಾರಿ ನಮ್ಮ ಕ್ಷೇತ್ರದಲ್ಲಿ ನಡೆಯುತ್ತಿದೆ, ಬೇಸಿಗೆಯಲ್ಲಿ ಬಿಸಿಲು ಹೆಚ್ಚಾದ ಕಾರಣ ಕ್ಷೇತ್ರಕ್ಕೆ ಇದುವರೆಗೂ ಯಾವುದೇ ನೀರಿನ ಸಮಸ್ಯೆ ಉದ್ಭವಿಸಿಲ್ಲ, ಯರಗೋಲ್ ಜಲಾಶಯ ಉದ್ಘಾಟಿಸಿ ಕ್ಷೇತ್ರದಾದ್ಯಂತ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ, ಈ ಹಿನ್ನೆಲೆಯಲ್ಲಿ ಈ ಬಾರಿ ಕ್ಷೇತ್ರದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಗೌಡ, ಪಿಚ್ಚ ಹಳ್ಳಿ ಗೋವಿಂದರಾಜು, ಪುರಸಭೆ ಸದಸ್ಯ ಶಾಂಶುದ್ದೀನ್ ಬಾಬು, ಬೂದಿಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್,ಕುಮಾರ್, ಶಫಿ, ಮುನಿರಾಜು ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ