ಪಶುವೈದ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳು ಪಟ್ಟಣದಲ್ಲಿ ಕೆ ಆರ್ ಎಸ್ ಜಿಲ್ಲಾಧ್ಯಕ್ಷ ಚಿಕ್ಕನಾರಾಯಣ ಆರೋಪ
(KOLARA): ಬಂಗಾರಪೇಟೆ :ಪಶುಗಳ ರಕ್ಷಣೆ ಹಾಗೂ ರೈತರ ಬದುಕಿಗೆ ದಾರಿ ದೀಪವಾಗಬೇಕಾಗಿದ್ದ ಪಶು ವೈದ್ಯ ಇಲಾಖೆಯ ಉಪನಿರ್ದೇಶಕರು ಮತ್ತು ವೈದ್ಯಾಧಿಕಾರಿಗಳು ಪಶು ಪಾಲನ ಯೋಜನೆಯ ಕೋಟ್ಯಾಂತರ ರೂಪಾಯಿ ಹಣವನ್ನು ಲೂಟಿ ಮಾಡಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆಯ ಜಿಲ್ಲಾಧ್ಯಕ್ಷ ಚಿಕ್ಕನಾರಾಯಣ ಗಂಭೀರ ಆರೋಪ ಮಾಡಿದರು.
ಪಟ್ಟಣದ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎಷ್ಟೇ ಮನವಿ ಪತ್ರಗಳು ನೀಡಿದರು ಸಹ ನಮ್ಮ ಮನವಿಗಳಿಗೆ ಅಧಿಕಾರಿಗಳು ಯಾವುದೇ ಕಾನೂನು ರೀತಿ ಕ್ರಮ ಕೈಗೊಳ್ಳದ ಕಾರಣ ಅಂತಿಮವಾಗಿ ಬೆಂಗಳೂರಿನಿಂದ ಪಶುವೈದ್ಯ ಇಲಾಖೆಯ ಭವನದವರೆಗೂ ಕಾಲ್ನಡಿಗೆ ಮುಖಾಂತರ ಜಾಥ ನಡೆಸಿ ಪಶು ಇಲಾಖೆ ಭವನದ ಮುಂದೆ ಎದುರು ಅನಿರ್ದಿಷ್ಟ ಅವಧಿ ಪ್ರತಿಭಟನೆ ಹಮ್ಮಿಕೊಂಡು, ಪಶು ವೈದ್ಯ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರವನ್ನು ಬಯಲುಗೆಳೆದು ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುವ ತನಕ ಅನಿರ್ದಿಷ್ಟಾವಧಿ ಹೋರಾಟ ನಿಲ್ಲಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಯುವ ಘಟಕ. (ಚಿಂಟು)ಆರ್ಟ್ಸ್.ರಾಮಚಂದ್ರ, ಜಿಲ್ಲಾ ಕಾರ್ಮಿಕ ಘಟಕದ ಕಾರ್ಯದರ್ಶಿ ಅಂಬರೀಶ್, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್, ಕೆವಿ ಶ್ರೀನಾಥ್ ಇದ್ದರು.
ವರದಿ ವಿಷ್ಣು ಕೋಲಾರ